ಕುಡ್ತಮುಗೇರು : ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕರಿಮೆಣಸು ಕಳವು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಕುಡ್ತಮುಗೇರು : ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕರಿಮೆಣಸು ಕಳವು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

13 March 2024

ಕುಡ್ತಮುಗೇರು : ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕರಿಮೆಣಸು ಕಳವು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಮಾರ್ಚ್ 13, 2024 (ಕರಾವಳಿ ಟೈಮ್ಸ್) : ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿನ ಮನೆಯ ಕೋಣೆಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕರಿಮೆಣಸು ಕಳವುಗೈದ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. 

ಇಲ್ಲಿನ ನಿವಾಸಿ ಕೆ ಅಣ್ಣು ಸಪಲ್ಯ (62) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಅಣ್ಣು ಸಪಲ್ಯ ಅವರು ಸುಮಾರು 150 ಕೆಜಿ ಒಣಗಿಸಿ ಸುಲಿಯದ ಅಡಿಕೆಯನ್ನು ಮತ್ತು ಸುಮಾರು 30 ಕೆಜಿ 4 ಗೋಣಿ ಚೀಲದಲ್ಲಿ ಒಣಗಿದ ಕರಿಮೆಣಸುಗಳನ್ನು ಗೋಣಿಯಲ್ಲಿ ಕಟ್ಟಿ ಮನೆಯ ಸಮೀಪದ ಕೊಠಡಿಯಲ್ಲಿಟ್ಟಿದ್ದು, ಮಂಗಳವಾರ ರಾತ್ರಿ ಅಡಿಕೆ ಸಂಗ್ರಹದ ಕೊಠಡಿಯನ್ನು ಪರಿಶೀಲಿಸಿ ಮಲಗಿದ್ದರು. ಬುಧವಾರ ಬೆಳಿಗ್ಗೆ ಎದ್ದು ನೋಡಿದಾಗ, ಅಡಿಕೆ ಮತ್ತು ಕಾಳು ಮೆಣಸು ಸಂಗ್ರಹಿಸಿ ಇಟ್ಟ  ಕೊಠಡಿಯ ಬಾಗಿಲಿನ ಚಿಲಕವನ್ನು ಮುರಿದಿರುವುದು ಕಂಡು ಬಂದಿರುತ್ತದೆ. ಕೊಠಡಿಯ ಒಳಗೆ ಪರಿಶೀಲಿಸಿದಾಗ ಅಡಿಕೆ ಮತ್ತು ಕಾಳು ಮೆಣಸು ಕಳವಾಗಿರುವುದು ಬೆಳಕಿಗೆ ಬಂದಿದೆ. 

ಕಳ್ಳತನವಾದ ಸೊತ್ತುಗಳ ಒಟ್ಟು ಮೌಲ್ಯ 57 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆÉ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕುಡ್ತಮುಗೇರು : ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕರಿಮೆಣಸು ಕಳವು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top