ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯಾಗಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ನೇಮಕ - Karavali Times ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯಾಗಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ನೇಮಕ - Karavali Times

728x90

29 March 2024

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯಾಗಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ನೇಮಕ

ಬಂಟ್ವಾಳ, ಮಾರ್ಚ್ 29, 2024 (ಕರಾವಳಿ ಟೈಮ್ಸ್) : ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರೂ, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಬಿ ರಮಾನಾಥ ರೈ ಅವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಚಾರ ಉಸ್ತುವಾರಿಯಾಗಿ ಕೆಪಿಸಿಸಿ ಸದಸ್ಯ, ಜಿಲ್ಲಾ ಪಂಚಾಯತ್ ಸಜಿಪಮುನ್ನೂರು ಕ್ಷೇತ್ರದ ನಿಕಪಟಪೂರ್ವ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರನ್ನು ನೇಮಿಸಲಾಗಿದೆ.  

ಉಳಿದಂತೆ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಬ್ಲಾಕ್ ವ್ಯಾಪ್ತಿಯಲ್ಲಿ ಬಂಟ್ವಾಳ ಬ್ಲಾಕಿಗೆ ಜಗದೀಶ್ ಕೊಯಿಲ ಹಾಗೂ ಪಾಣೆಮಂಗಳೂರು ಬ್ಲಾಕಿಗೆ ಅನ್ವರ್ ಕರೋಪಾಡಿ ಅವರನ್ನು ಬ್ಲಾಕ್ ವ್ಯಾಪ್ತಿಗಳಿಗೆ ಕಾಂಗ್ರೆಸ್ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿ ರಮಾನಾಥ ರೈ ಆದೇಶಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ : ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯಾಗಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ನೇಮಕ Rating: 5 Reviewed By: karavali Times
Scroll to Top