ಪಾಣೆಮಂಗಳೂರು : ಹಿಟ್ ಆಂಡ್ ರನ್ ನಡೆಸಿದ ಸ್ಕೂಟರ್ ಸವಾರ, ಬೈಕ್ ಸವಾರ ಆಸ್ಪತ್ರೆಗೆ - Karavali Times ಪಾಣೆಮಂಗಳೂರು : ಹಿಟ್ ಆಂಡ್ ರನ್ ನಡೆಸಿದ ಸ್ಕೂಟರ್ ಸವಾರ, ಬೈಕ್ ಸವಾರ ಆಸ್ಪತ್ರೆಗೆ - Karavali Times

728x90

18 March 2024

ಪಾಣೆಮಂಗಳೂರು : ಹಿಟ್ ಆಂಡ್ ರನ್ ನಡೆಸಿದ ಸ್ಕೂಟರ್ ಸವಾರ, ಬೈಕ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಮಾರ್ಚ್ 18, 2024 (ಕರಾವಳಿ ಟೈಮ್ಸ್) : ಬೈಕಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತಪಡಿಸಿದ ಸ್ಕೂಟರ್ ಸವಾರ ನಿಲ್ಲಿಸದೆ ಪರಾರಿಯಾದ ಘಟನೆ ನರಿಕೊಂಬು ಗ್ರಾಮದ ನೇತ್ರಾವತಿ ಸೇತುವೆ ಬಳಿ ಭಾನುವಾರ ಸಂಭವಿಸಿದೆ. 

ಗಾಯಗೊಂಡ ಬೈಕ್ ಸವಾರರನ್ನು ಚರಣ್ ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಆಕ್ಟಿವಾ ಸ್ಕೂಟರ್ ಸವಾರ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಧಾವಿಸಿ ಬಂದು ಬೈಕಿಗೆ ಡಿಕ್ಕಿ ಹೊಡೆದು  ಬಳಿಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡ ಚರಣ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು-ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಚರಣ್ ಅವರ ಸ್ನೇಹಿತ ವಿಜಯಕುಮಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಹಿಟ್ ಆಂಡ್ ರನ್ ನಡೆಸಿದ ಸ್ಕೂಟರ್ ಸವಾರ, ಬೈಕ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top