ಶಂಭೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳ್ತಂಗಡಿ ನಿವಾಸಿ ವ್ಯಕ್ತಿ ಮೃತ್ಯು - Karavali Times ಶಂಭೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳ್ತಂಗಡಿ ನಿವಾಸಿ ವ್ಯಕ್ತಿ ಮೃತ್ಯು - Karavali Times

728x90

19 March 2024

ಶಂಭೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳ್ತಂಗಡಿ ನಿವಾಸಿ ವ್ಯಕ್ತಿ ಮೃತ್ಯು

ಬಂಟ್ವಾಳ, ಮಾರ್ಚ್ 19, 2024 (ಕರಾವಳಿ ಟೈಮ್ಸ್) : ಶಂಭೂರು ನೇತ್ರಾವತಿ ನದಿ ನೀರಿನಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ನಿವಾಸಿ, ವಿವಾಹಿತ ಇಲೆಕ್ಟ್ರೀಷಿಯನ್ ವೃತ್ತಿಯ ಲೋಹಿತಾಶ್ವ ಎಂದು ಹೆಸರಿಸಲಾಗಿದೆ. ಇವರು ಸ್ನೇಹಿತರ ಜೊತೆ ಕಾರಿನಲ್ಲಿ ಶಂಭೂರು ಗ್ರಾಮದ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ನೇತ್ರಾವತಿ ನದಿಗೆ ಸ್ನಾನಕ್ಕೆ ಬಂದವರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಇವರ ಸಾವಿನಲ್ಲಿ ಸಂಶಯ ಇದೆ ಎಂದು ಅವರ ಭಾವ ಸಂದೀಪ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಶಂಭೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳ್ತಂಗಡಿ ನಿವಾಸಿ ವ್ಯಕ್ತಿ ಮೃತ್ಯು Rating: 5 Reviewed By: karavali Times
Scroll to Top