ಶಂಭೂರು : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ, ನಾಲ್ವರಿಗೆ ಗಾಯ - Karavali Times ಶಂಭೂರು : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ, ನಾಲ್ವರಿಗೆ ಗಾಯ - Karavali Times

728x90

12 March 2024

ಶಂಭೂರು : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ, ನಾಲ್ವರಿಗೆ ಗಾಯ

ಬಂಟ್ವಾಳ, ಮಾರ್ಚ್ 13, 2024 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಎರಡೂ ವಾಹನದಲ್ಲಿದ್ದ ನಾಲ್ಕು ಮಂದಿ ಗಾಯಗೊಂಡ ಘಟನೆ ಶಂಭೂರು ಗ್ರಾಮದ ಷಣ್ಮುಖ ದೇವಸ್ಥಾನದ ದ್ವಾರದ ಬಳಿ ಸಂಭವಿಸಿದೆ. 

ಸ್ಕೂಟರ್ ಸವಾರ ಪಡೀಲು-ಅಳಪೆ ನಿವಾಸಿ ಉದಯ ಕುಮಾರ್, ಸಹಸವಾರ, ಸಂಬಂಧಿ ಸುಂದರ ಬಂಗೇರ, ಬೈಕ್ ಸವಾರ ಅಶ್ವಥ್ ಹಾಗೂ ಅದರಲ್ಲಿದ್ದ ಸಹಸವಾರ ಗಾಯಗೊಂಡಿದ್ದಾರೆ. 

ಉದಯ ಕುಮಾರ್ ಅವರು ಭಾನುವಾರ ರಾತ್ರಿ ವೇಳೆ ಸುಂದರ ಬಂಗೇರ ಅವರನ್ನು ಸಹಸವಾರರಾಗಿ ಕುಳ್ಳಿರಿಸಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಶಂಭೂರು ಷಣ್ಮುಖ ದೇವಸ್ಥಾನದ ದ್ವಾರದ ಬಳಿ ಎದುರಿನಿಂದ ಅಶ್ವಥ್ ಅವರು ಸವಾರಿ ಮಾಡಿಕೊಂಡು ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ಎರಡೂ ದ್ವಿಚಕ್ರ ವಾಹನದಲ್ಲಿದ್ದವರು ವಾಹನ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಶಂಭೂರು : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ, ನಾಲ್ವರಿಗೆ ಗಾಯ Rating: 5 Reviewed By: karavali Times
Scroll to Top