ಕಿಟ್ ಹಂಚಿಕೆ ವಿಚಾರದಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ : ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು - Karavali Times ಕಿಟ್ ಹಂಚಿಕೆ ವಿಚಾರದಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ : ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು - Karavali Times

728x90

5 March 2024

ಕಿಟ್ ಹಂಚಿಕೆ ವಿಚಾರದಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ : ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ, ಮಾರ್ಚ್ 06, 2024 (ಕರಾವಳಿ ಟೈಮ್ಸ್) : ತಾಲೂಕಿನ ಮಿತ್ತಬಾಗಿಲು ನಿವಾಸಿ ಅಶ್ರಫ್ ಪಿ (35) ಅವರು ಸೋಮವಾರ ಸಂಜೆ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ವೇಳೆ ಕಿಟ್ ಹಂಚುವ ವಿಚಾರದಲ್ಲಿ ತಗಾದೆ ಎತ್ತಿ ಆರೋಪಿಗಳಾದ ಸಿನಾನ್, ಅದ್ದು ಅಲಿಯಾಸ್ ಅಬ್ದುಲ್ ರಹಿಮಾನ್, ಕಬೀರ್ ಹಾಗೂ ಚೆರಿಯ ಮೋನು ಮೈಲಾರ್ ಎಂಬವರು ಹಲ್ಲೆ ನಡೆಸಿದ ಘಟನೆ ನಡೆದಿದೆ. 

ಈ ಬಗ್ಗೆ ಅಶ್ರಫ್ ಅವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 27/2024 ಕಲಂ 504, 506, 324, 324, ಆರ್/ಡಬ್ಲ್ಯು 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮತಿ ಜೈನಾಬ್ ಎಂಬವರು ನೀಡಿದ ದೂರಿನಂತೆ, ಆರೋಪಿಗಳಾದ ತಾಲಿ ಉಮ್ಮರ್, ಸಪ್ವಾನ್, ಸಿನಾನ್, ಆಸಿಫ್, ಹಕೀಂ, ಟಿ ಎ ಮಹಮ್ಮದ್ ಹಾಗೂ ಇತರರು ಮನೆಗೆ ಅಕ್ರಮವಾಗಿ ಪ್ರವೇಶಿಸಿ, ನನಗೆ ಹಾಗೂ ಅವರ ಅಣ್ಣ ಅಬ್ದುಲ್ ರಹಿಮಾನ್ ಅವರಿಗೆ ಹಲ್ಲೆ ನಡೆಸಿ, ಅವ್ಯಾಚವಾಗಿ ಬೈದು, ಜೀವಬೆದರಿಕೆ ಹಾಕಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಜೈನಾಬ್ ಅವರು ಪುತ್ತೂರು ಪ್ರಗತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆಯೂ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 28/2024 ಕಲಂ 143, 147, 504, 506, 448, 354, ಆರ್/ಡಬ್ಲ್ಯು 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಕಿಟ್ ಹಂಚಿಕೆ ವಿಚಾರದಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ : ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top