ಬಿ.ಸಿ.ರೋಡು : ಕೆ.ಎಸ್.ಆರ್.ಟಿ.ಸಿ. ಬಸ್ಸು-ಲಾರಿ ಡಿಕ್ಕಿ, ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕಗೆ ಗಾಯ - Karavali Times ಬಿ.ಸಿ.ರೋಡು : ಕೆ.ಎಸ್.ಆರ್.ಟಿ.ಸಿ. ಬಸ್ಸು-ಲಾರಿ ಡಿಕ್ಕಿ, ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕಗೆ ಗಾಯ - Karavali Times

728x90

17 March 2024

ಬಿ.ಸಿ.ರೋಡು : ಕೆ.ಎಸ್.ಆರ್.ಟಿ.ಸಿ. ಬಸ್ಸು-ಲಾರಿ ಡಿಕ್ಕಿ, ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕಗೆ ಗಾಯ

ಬಂಟ್ವಾಳ, ಮಾರ್ಚ್ 17, 2024 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ಸು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಸಿ ರೋಡು ಸಮೀಪದ ಕೈಕಂಬ ಎಂಬಲ್ಲಿ ಶನಿವಾರ ಸಂಭವಿಸಿದೆ.

ಗಾಯಾಳು ಬಸ್ ಪ್ರಯಾಣಿಕನನ್ನು ತೆಲಂಗಾಣ ರಾಜ್ಯ ಮಲ್ಕಜ್ ಗಿರಿ ಮೆಡ್ ಚೆಲ್ ಜಿಲ್ಲೆ ಸಿಕಂದರ್ ಬಾದ್ ನಿವಾಸಿ ಆರ್ ದೇದೀಪ್ ಶರ್ಮಾ ಎಂದು ಹೆಸರಿಸಲಾಗಿದೆ. ಇವರು ಶನಿವಾರ ಮಧ್ಯಾಹ್ನ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬಿ ಮೂಡ ಗ್ರಾಮದ ಬಿ ಸಿ ರೋಡು ಸಮೀಪದ ಕೈಕಂಬ ಎಂಬಲ್ಲಿ, ಬಸ್ ಚಾಲಕ ಅಂಬರೀಶ್ ಅವರು ಬಸ್ಸನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಇವರು ಗಾಯಗೊಂಡಿದ್ದಾರೆ. ಗಾಯಾಳು ವ್ಯಕ್ತಿಯನ್ನು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ಕೆ.ಎಸ್.ಆರ್.ಟಿ.ಸಿ. ಬಸ್ಸು-ಲಾರಿ ಡಿಕ್ಕಿ, ಬಸ್ಸಿನ ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕಗೆ ಗಾಯ Rating: 5 Reviewed By: karavali Times
Scroll to Top