ಬಡಗಬೆಳ್ಳೂರು : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಬಡಗಬೆಳ್ಳೂರು : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

30 March 2024

ಬಡಗಬೆಳ್ಳೂರು : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಮಾರ್ಚ್ 31, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ತುಂಬಿದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಡಗಬೆಳ್ಳೂರು ಗ್ರಾಮದ ಮಾಯಿಪಡ್ಕ ಎಂಬಲ್ಲಿ ಶುಕ್ರವಾರ ನಡೆದಿದೆ. 

ಬಡಗಬೆಳ್ಳೂರು ಗ್ರಾಮದ ಮಾಯಿಪಡ್ಕ ಎಂಬಲ್ಲಿ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ ಅವರ ನೇತೃತ್ವದ ಪೊಲೀಸರು ಕೆಎ 19 ಎಎ 5713 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತಪಾಸಣೆಗಾಗಿ ತಡೆದು ಪರಿಶೀಲಿಸಿದಾಗ, ಸದ್ರಿ ಲಾರಿಯಲ್ಲಿ ಮರಳು ತುಂಬಿಸಿರುವುದು ಕಂಡು ಬಂದಿದೆ. ಸದ್ರಿ ಮರಳನ್ನು ಅಡ್ಡೂರು ಎಂಬಲ್ಲಿಂದ ಕಳವು ಮಾಡಿಕೊಂಡು ಬಂದಿರುವುದಾಗಿ ಲಾರಿ ಚಾಲಕ ಹಾಗೂ ಮಾಲಕ ಶಶಿಧರ ಶೆಟ್ಟಿ ಎಂಬಾತ ಒಪ್ಪಿಕೊಂಡಿದ್ದು, ಈತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಡಗಬೆಳ್ಳೂರು : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top