ಪುದು : ಮನೆಗೆ ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿ, ಆಸ್ಪತ್ರೆಗೆ ದಾಖಲು - Karavali Times ಪುದು : ಮನೆಗೆ ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿ, ಆಸ್ಪತ್ರೆಗೆ ದಾಖಲು - Karavali Times

728x90

8 April 2024

ಪುದು : ಮನೆಗೆ ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿ, ಆಸ್ಪತ್ರೆಗೆ ದಾಖಲು

ಬಂಟ್ವಾಳ, ಎಪ್ರಿಲ್ 08, 2024 (ಕರಾವಳಿ ಟೈಮ್ಸ್) : ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. 

ಇರಿತದಿಂದ ಗಾಯಗೊಂಡವರನ್ನು ಇಲ್ಲಿನ ನಿವಾಸಿ ಮುಹಮ್ಮದ್ ಬಿಲಾಲ್ ಎಂದು ಹೆಸರಿಸಲಾಗಿದ್ದು, ಆರೋಪಿಯನ್ನು ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಗಾಯಾಳು ಬಿಲಾಲ್ ಅವರ ಸಹೋದ ಮುಹಮ್ಮದ್ ರಮೀಝ್ ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ಅಣ್ಣ ಬಿಲಾಲ್, ತಮ್ಮ ಮುಹಮ್ಮದ್ ಮಿಗ್ದಾದ್ ಹಾಗೂ ಅಕ್ಕನೊಂದಿಗೆ ವಾಸವಾಗಿದ್ದು, ಭಾನುವಾರ ಸಂಜೆ ಬಿಲಾಲ್ ಹಾಗೂ ರಮೀಝ್ ಇಬ್ಬರೇ ಇದ್ದು, ರಮೀಝ್ ಮನೆಯ ಮಹಡಿಯ ಕೋಣೆಯಲ್ಲಿದ್ದ ವೇಳೆ ಕೆಳಗೆ ಬೊಬ್ಬೆ ಕೇಳಿ ಕೆಳಗೆ ಬಂದು ನೋಡಿದಾಗ ಆರೋಪಿ ಅಬ್ದುಲ್ ರಹಿಮಾನ್ ಯಾನೆ ಮುನ್ನಿ ಎಂಬಾತ ತನ್ನ ಕೈಯಲ್ಲಿದ್ದ ಚೂರಿಯಿಂದ ಬಿಲಾಲ್ ಅವರ ಹೊಟ್ಟೆಗೆ 2 ಬಾರಿ ಇರಿದಿರುವುದಲ್ಲದೆ ಕೈಗೆ ತಿವಿದು ಗಾಯಗೊಳಿಸಿದ್ದಾನೆ. ಸ್ಥಳಕ್ಕೆ ರಮೀಝ್ ಬರುವುದನ್ನು ನೋಡಿದ ಆರೋಪಿ ಅಲ್ಲಿಂದ ಓಡಿ ಹೋಗಿರುತ್ತಾನೆ. ಗಾಯಾಳು ಬಿಲಾಲ್ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 47/2024 ಕಲಂ 448, 326, 307 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪುದು : ಮನೆಗೆ ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿ, ಆಸ್ಪತ್ರೆಗೆ ದಾಖಲು Rating: 5 Reviewed By: karavali Times
Scroll to Top