ಮೈಸೂರು : ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ನೇತೃತ್ವದಲ್ಲಿ 21ನೇ ವರ್ಷದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ - Karavali Times ಮೈಸೂರು : ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ನೇತೃತ್ವದಲ್ಲಿ 21ನೇ ವರ್ಷದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ - Karavali Times

728x90

8 April 2024

ಮೈಸೂರು : ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ನೇತೃತ್ವದಲ್ಲಿ 21ನೇ ವರ್ಷದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ

ಮೈಸೂರು, ಎಪ್ರಿಲ್ 08, 2024 (ಕರಾವಳಿ ಟೈಮ್ಸ್) : ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ಅವರ ನೇತೃತ್ವದಲ್ಲಿ 21ನೇ ವರ್ಷದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮವು ಮೈಸೂರು-ಟಿಪ್ಪು ಟೌನ್ ಇಲ್ಲಿನ ಬಸವ ಧ್ಯಾನ ಮಂದಿರದಲ್ಲಿ ನಡೆಯಿತು.

ಮೈಸೂರು ಅತಾಯೇ ರಸೂಲ್ ಮೂವ್ ಮೆಂಟ್ ಅಧ್ಯಕ್ಷ ಖ್ವಾಜಾ ಅಝೀಂ ಶಾ ಚಿಶ್ತಿ ಹಾಗೂ ಇನ್ನಿತರ ಸೂಫಿ, ಶರಣರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಇದೇ ವೇಳೆ ಕಳೆದ 21 ವರ್ಷಗಳಿಂದ ನಿರಂತರವಾಗಿ ಪವಿತ್ರ ರಂಝಾನ್ ವೃತಸ್ಥರನ್ನು ಗೌರವಿಸಿ ಸ್ವಾಮೀಜಿಗಳು ಆಯೋಜಿಸಿಕೊಂಡು ಬರುತ್ತಿರುವ ಇಫ್ತಾರ್ ಕೂಟದ ಗೌರವಾರ್ಥವಾಗಿ ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿಗಳನ್ನು ಖ್ವಾಜಾ ಅಝೀಂ ಅಲಿ ಶಾ ಚಿಶ್ತಿ ಅವರು ಸನ್ಮಾನಿಸಿ ಗೌರವಿಸಿದರು.  

  • Blogger Comments
  • Facebook Comments

0 comments:

Post a Comment

Item Reviewed: ಮೈಸೂರು : ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ನೇತೃತ್ವದಲ್ಲಿ 21ನೇ ವರ್ಷದ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ Rating: 5 Reviewed By: karavali Times
Scroll to Top