ಕಡಬ : ಅಕ್ರಮ ಸ್ಫೋಟಕ ಬಳಸಿ ಕಲ್ಲು ಸ್ಫೋಟದಿಂದ ಮನೆಗೆ ಹಾನಿ, ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು - Karavali Times ಕಡಬ : ಅಕ್ರಮ ಸ್ಫೋಟಕ ಬಳಸಿ ಕಲ್ಲು ಸ್ಫೋಟದಿಂದ ಮನೆಗೆ ಹಾನಿ, ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು - Karavali Times

728x90

1 April 2024

ಕಡಬ : ಅಕ್ರಮ ಸ್ಫೋಟಕ ಬಳಸಿ ಕಲ್ಲು ಸ್ಫೋಟದಿಂದ ಮನೆಗೆ ಹಾನಿ, ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

ಕಡಬ, ಎಪ್ರಿಲ್ 01, 2024 (ಕರಾವಳಿ ಟೈಮ್ಸ್) : ಅಕ್ರಮ ಸ್ಫೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವ ಜಮೀನು ಮಾಲಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. 

ಕಡಬ ತಾಲೂಕು ಯೇನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ಎಂಬಲ್ಲಿನ ನಿವಾಸಿ ಆನಂದ ಗೌಡ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇವರ ಮನೆ ಸಮೀಪದ ನಿವಾಸಿ ದಯಾನಂದ ಎಂಬವರು ಏನೇಕಲ್ಲು ಗ್ರಾಮದ ಅಜಿರುಪೂಲಿ ಎಂಬಲ್ಲಿ ಅವರ ಜಮೀನಿನಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆಡು ಸೈಜು ಕಲ್ಲಗಳನ್ನಾಗಿ ತಯಾರಿಸುತ್ತಿರುವುದಾಗಿದೆ. ಇದರಿಂದ ಸ್ಫೋಟಗೊಂಡ ಕಲ್ಲುಗಳು ಆನಂದ ಗೌಡ ಅವರ ಮನೆಯ ಶೀಟುಗಳ ಮೇಲೆ ಸಿಡಿದು ಮನೆ ಶೀಟುಗಳು ಹಾನಿಗೊಂಡಿದೆ ಹಾಗೂ ಕಲ್ಲು ಹುಡಿಯಿಂದಾಗಿ ಪರಿಸರ ಮಾಲಿನ್ಯವೂ ಉಂಟಾಗುತ್ತಿದೆ ಎಂದು ನೀಡಿದ ದೂರಿನಂತೆ ಸುಬ್ರಮಣ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2024, ಕಲಂ 427 ಐಪಿಸಿ ಹಾಗೂ ಕಲಂ 5, 9ಬಿ(1)(ಬಿ) ಸ್ಪೋಟಕ ಕಾಯ್ದೆ ಅಧಿನಿಯಮ 1884 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡಬ : ಅಕ್ರಮ ಸ್ಫೋಟಕ ಬಳಸಿ ಕಲ್ಲು ಸ್ಫೋಟದಿಂದ ಮನೆಗೆ ಹಾನಿ, ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top