ಉತ್ತರ ಕರ್ನಾಟಕ ಚುನಾವಣೆ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾದ ರಮಾನಾಥ ರೈ - Karavali Times ಉತ್ತರ ಕರ್ನಾಟಕ ಚುನಾವಣೆ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾದ ರಮಾನಾಥ ರೈ - Karavali Times

728x90

1 May 2024

ಉತ್ತರ ಕರ್ನಾಟಕ ಚುನಾವಣೆ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾದ ರಮಾನಾಥ ರೈ

ಬಂಟ್ವಾಳ, ಮೇ 01, 2024 (ಕರಾವಳಿ ಟೈಮ್ಸ್) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮನಾಥ ರೈ ಅವರು ಕಾರವಾರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು. ಬಳಿಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಮಂತ್ ನಿಂಬಾಳ್ಕರ್ ಜೊತೆ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಶಬೀರ್ ಎಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಉತ್ತರ ಕರ್ನಾಟಕ ಚುನಾವಣೆ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾದ ರಮಾನಾಥ ರೈ Rating: 5 Reviewed By: karavali Times
Scroll to Top