ಬ್ರಹ್ಮರಕೂಟ್ಲು : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ - Karavali Times ಬ್ರಹ್ಮರಕೂಟ್ಲು : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ - Karavali Times

728x90

6 June 2024

ಬ್ರಹ್ಮರಕೂಟ್ಲು : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಜೂನ್ 06, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಳ್ಳಿಗೆ ಗ್ರಮದ ಬ್ರಹ್ಮರಕೂಟ್ಲು ಎಂಬಲ್ಲಿ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರನನ್ನು ಮಾಧವ ಎಂದು ಹೆಸರಿಸಲಾಗಿದೆ. ತುಂಬೆ ನಿವಾಸಿ ಗಣೇಶ್ ಸುವರ್ಣ ಅವರು ರಾಮಲ್ ಕಟ್ಟೆಯಿಂದ ಬ್ರಹ್ಮರಕೂಟ್ಲು ಕಡೆಗೆ ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಮಾಧವ ಅವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಮಾಧವ ಅವರಿಗೆ ಗಾಯವಾಗಿದ್ದು, ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬ್ರಹ್ಮರಕೂಟ್ಲು : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top