ಬರಿಮಾರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ತಡೆದು ಹಲ್ಲೆ, ಜೀವಬೆದರಿಕೆ - Karavali Times ಬರಿಮಾರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ತಡೆದು ಹಲ್ಲೆ, ಜೀವಬೆದರಿಕೆ - Karavali Times

728x90

3 June 2024

ಬರಿಮಾರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ತಡೆದು ಹಲ್ಲೆ, ಜೀವಬೆದರಿಕೆ

 ಬಂಟ್ವಾಳ, ಜೂನ್ 03, 2024 (ಕರಾವಳಿ ಟೈಮ್ಸ್) : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕುಟುಂಬವೊಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಒಡ್ಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬರಿಮಾರು ನಿವಾಸಿ ಪುರುಷೋತ್ತಮ (35) ಎಂಬವರೇ ಹಲ್ಲೆಗೊಳಗಾದ ವ್ಯಕ್ತಿ. ಇವರು ಜೂನ್ 1 ರಂದು ರಾತ್ರಿ ಕೆಲಸ ಬಿಟ್ಟು ಗಾಣದಪಾಲು ರಸ್ತೆಯಲ್ಲಿ ಬರುತ್ತಿರುವಾಗ, ಆರೋಪಿ ಸಂಜೀವ ಪೂಜಾರಿ ಎಂಬಾತ ಏಕಾಏಕಿ ತಡೆದು ನಿಲ್ಲಿಸಿ, ಅವ್ಯಾಚವಾಗಿ ನಿಂದಿಸಿ, ಕೈಯಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಆರೋಪಿತನು ತನ್ನ ಮನೆಯ ಇತರ ಸದಸ್ಯರನ್ನೂ ಅಲ್ಲಿಗೆ ಕರೆಸಿದ್ದು, ಅವರುಗಳ ಪೈಕಿ  ಉಮೇಶ್ ಎಂಬಾತ ಕೈಯಿಂದ ಹಲ್ಲೆ ನಡೆಸಿರುತ್ತಾರೆ.  ಆರೋಪಿ ಸಂಜೀವ ಪೂಜಾರಿ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಪುರುಷೋತ್ತಮ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳು ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2024, ಕಲಂ 341, 323, 504, 506 ಜೊತೆಗೆ 34 ಐಪಿಸಿಯತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬರಿಮಾರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ತಡೆದು ಹಲ್ಲೆ, ಜೀವಬೆದರಿಕೆ Rating: 5 Reviewed By: karavali Times
Scroll to Top