ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶಕ್ಕೆ ಪಡೆದ ಬಂಟ್ವಾಳ ನಗರ ಪೊಲೀಸರು, ಆರೋಪಿ ಚಾಲಕರು ಪರಾರಿ - Karavali Times ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶಕ್ಕೆ ಪಡೆದ ಬಂಟ್ವಾಳ ನಗರ ಪೊಲೀಸರು, ಆರೋಪಿ ಚಾಲಕರು ಪರಾರಿ - Karavali Times

728x90

4 June 2024

ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶಕ್ಕೆ ಪಡೆದ ಬಂಟ್ವಾಳ ನಗರ ಪೊಲೀಸರು, ಆರೋಪಿ ಚಾಲಕರು ಪರಾರಿ

ಬಂಟ್ವಾಳ, ಜೂನ್ 04, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟದ ಲಾರಿಗಳನ್ನು ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಆದರೆ ಆರೋಪಿ ಲಾರಿ ಚಾಲಕರು ಪೊಲೀಸರಿಂದ ತಪ್ಪಿಸಿ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. 

ಮಂಗಳವಾರ ಬೆಳಿಗ್ಗಿನ ಜಾವ ಪಾಣೆಮಂಗಳೂರು ಎಂಬಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ಬಿ ಸಿ ರೋಡು ಕಡೆಯಿಂದ ಬರುತ್ತಿದ್ದ ಕೆಎ21 ಸಿ4213 ಹಾಗೂ ಕೆಎ19 ಎಎ8752 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚನೆ ನೀಡಿದಾಗ, ಅದರ ಚಾಲಕರು ರಸ್ತೆಯಲ್ಲಿ ನಿಲ್ಲಿಸಿ ಓಡಿ ಹೋಗಿರುತ್ತಾರೆ. ಬಳಿಕ ಸದ್ರಿ ಟಿಪ್ಪರ್ ಲಾರಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಅವುಗಳಲ್ಲಿ ಮರಳು ಲೋಡ್ ಮಾಡಿರುವುದು ಕಂಡುಬಂದಿರುತ್ತದೆ. ಯಾವುದೇ ಪರವಾನಿಗೆ ಇಲ್ಲದೆ ಮರಳು ಕಳವು ಮಾಡಿ ಅಕ್ರಮ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತಪಡಿಸಿಕೊಂಡ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶಕ್ಕೆ ಪಡೆದ ಬಂಟ್ವಾಳ ನಗರ ಪೊಲೀಸರು, ಆರೋಪಿ ಚಾಲಕರು ಪರಾರಿ Rating: 5 Reviewed By: karavali Times
Scroll to Top