ತುಂಬೆ : ಸರಕಾರಿ ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ದಾರುಣ ಸಾವು - Karavali Times ತುಂಬೆ : ಸರಕಾರಿ ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ದಾರುಣ ಸಾವು - Karavali Times

728x90

10 June 2024

ತುಂಬೆ : ಸರಕಾರಿ ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ದಾರುಣ ಸಾವು

ಬಂಟ್ವಾಳ, ಜೂನ್ 10, 2024 (ಕರಾವಳಿ ಟೈಮ್ಸ್) : ತುಂಬೆಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದಗೆ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿಯಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ತುಂಬೆ ಗ್ರಾಮದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಎಂದು ಹೆಸರಿಸಲಾಗಿದೆ. 

ಸೇಸಪ್ಪ ಅವರು ಮನೆಯಿಂದ ಸಾಮಾನು ಕೊಂಡುಹೋಗಲೆಂದು ತುಂಬೆ ಪೇಟೆಗೆ ಬಂದಿದ್ದು, ಇಲ್ಲಿನ ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಪರಸಪ್ಪ ಶಿರಗುಂಪಿ ಎಂಬವರು ಚಲಾಯಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸೇಸಪ್ಪ ಅವರ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಸ್ಥಳೀಯರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತುಂಬೆ ನಿವಾಸಿ ರಾಜೇಶ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತುಂಬೆ : ಸರಕಾರಿ ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ದಾರುಣ ಸಾವು Rating: 5 Reviewed By: karavali Times
Scroll to Top