ಗಡಿಯಾರ : ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times ಗಡಿಯಾರ : ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times

728x90

10 July 2024

ಗಡಿಯಾರ : ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಜುಲೈ 10, 2024 (ಕರಾವಳಿ ಟೈಮ್ಸ್) : ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. 

ಗಾಯಗೊಂಡ ಬೈಕ್ ಸವಾರನನ್ನು ಬೆಳ್ತಂಗಡಿ  ನಿವಾಸಿ ಗಣೇಶ್ (39) ಎಂದು ಹೆಸರಿಸಲಾಗಿದೆ. ಗಣೇಶ್ ಅವರು ಬೈಕಿನಲ್ಲಿ ಸಂಚರಿಸುತ್ತಿರುವಾಗ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಮಹಮ್ಮದ್ ಆಸಿಫ್ ಎಂಬವರು ಚಲಾಯಿಸುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದಿಂದ ಬೈಕ್ ಸಮೇತ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗಡಿಯಾರ : ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top