ಬಂಟ್ವಾಳ, ಫೆಬ್ರವರಿ 05, 2025 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ 103 ಅರ್ಜಿಗಳು, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕಿಗೆ ಸಂಬಂಧಪಟ್ಟ ತಲಾ 6, ಸುಳ್ಯ ತಾಲೂಕಿಗೆ ಸಂಬಂಧಪಟ್ಟ 5 ಹಾಗೂ ಕಡಬ ತಾಲೂಕಿಗೆ ಸಂಬಂಧಪಟ್ಟ 1 ಅರ್ಜಿ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಒಟ್ಟು 121 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿದೆ.
5 February 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment