ಬಂಟ್ವಾಳ, ಮೇ 08, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಮೇ 14 ರಂದು ಬುಧವಾರ 22ನೇ ಪ್ರತಿಷ್ಠಾವರ್ಧಂತ್ಯುತ್ಸವದ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಬೆಳಿಗ್ಗೆ ಗಣಹೋಮ, ಶ್ರೀ ಗಣಪತಿ ಶ್ರೀ ಶಾಸ್ತಾರ ಮತ್ತು ದೇವಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ನಂತರ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.
ಮೇ 18 ಮತ್ತು 19ರಂದು ಶ್ರೀ ಕ್ಷೇತ್ರದಲ್ಲಿರುವ ಅಶ್ವತ್ಥ ಸಾನಿಧ್ಯದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಂಸ್ಕಾರ ನಡೆಯಲಿರುವುದು. ಮೇ 18 ರಂದು ಭಾನುವಾರ ಸಂಜೆ 6 ಗಂಟೆಗೆ ಪ್ರಾರ್ಥನೆ, ಆರೂಢ ಪರಿಗ್ರಹ, ಪುಣ್ಯಾಹ, ಆರೂಢ ಶುದ್ಧಿ, ವಾಸ್ತು ರಕ್ಷೆಘ್ನ ಹೋಮ, ವಾಸ್ತು ಬಲಿ ಹಾಗೂ ಮೇ 19 ರಂದು ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ 9.08ಕ್ಕೆ ಮಿಥುನ ಲಗ್ನಕ್ಕೆ ಅಶ್ವತ್ಥ ಉಪನಯನ ಹಾಗೂ ವಿವಾಹ ಸಂಸ್ಕಾರ ನಡೆಯಲಿದೆ ಎಂದು ಚಂಡಿಕಾಪರಮೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷ ಲೋಕನಾಥ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment