ಬಂಟ್ವಾಳ, ಮೇ 26, 2025 (ಕರಾವಳಿ ಟೈಮ್ಸ್) : ಭಾರೀ ಮಳೆ ಕಾರಣದಿಂದ ಚಾಲಕನ ನಿಯಂತ್ರಣ ಮೀರಿದ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಯ ಚರಂಡಿಗೆ ಇಳಿದ ಘಟನೆ ರಾಷ್ಟ್ರೀಯ ಹೆದ್ದಾರಿ-75 ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಸೋಮವಾರ ಸಂಭವಿಸಿದೆ.
ಘಟನೆಯಿಂದಾಗಿ ಬಸ್ಸಿಗೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಬಸ್ಸು ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯಿಂದ ಬ್ರೇಕ್ ನಿಯಂತ್ರಣಕ್ಕೆ ಬರದೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
0 comments:
Post a Comment