ಬಂಟ್ವಾಳ, ಮೇ 10, 2025 (ಕರಾವಳಿ ಟೈಮ್ಸ್) : ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಣಂದೂರು ಗ್ರಾಮದ ಪಣಕಜೆ ಸೊಸೈಟಿ ಬಳಿ ಗುರುವಾರ ಸಂಭವಿಸಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಿಂದ ಗಾಯಗೊಂಡ ಬೈಕ್ ಸವಾರನನ್ನು ಶಿವಪ್ರಸಾದ್ ಎಂದು ಹೆಸರಿಸಲಾಗಿದೆ. ಇವರು ಬೈಕಿನಲ್ಲಿ ಪೂಂಜಾಲಕಟ್ಟೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಪೂಂಜಾಲಕಟ್ಟೆ ಕಡೆಯಿಂದ ಪಣಕಜೆ ಕಡೆಗೆ ಸಿರಿಲ್ ಸಿಕ್ವೇರಾ ಎಂಬವರು ಚಲಾಯಿಸುತ್ತಿದ್ದ ಕಾರು ವಾಹನಗಳನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಶಿವಪ್ರಸಾದ್ ಅವರ ತಲೆ, ಮೂಗು ಹಾಗೂ ಕೈಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment