ಬಂಟ್ವಾಳ, ಮೇ 31, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿಯಾಗಿ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ಪತಿ-ಪತ್ನಿ ಗಾಯಗೊಂಡ ಘಟನೆ ಬಿ ಸಿ ರೋಡು ಸಮೀಪದ ಮುಖ್ಯ ವೃತ್ತದ ಬಳಿ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರ ದಂಪತಿಯನ್ನು ಪಾಣೆಮಂಗಳೂರು ಗ್ರಾಮದ ಕಲ್ಲಗುಡ್ಡೆ ನಿವಾಸಿಗಳಾದ ರತ್ನಾಕರ (28) ಹಾಗೂ ಅವರ ಪತ್ನಿ ಲಿಖಿತಾ ಎಂದು ಹೆಸರಿಸಲಾಗಿದೆ. ಇವರು ಸ್ಕೂಟರಿನಲ್ಲಿ ಬಿ ಸಿ ರೋಡು ಮುಖ್ಯ ವೃತ್ತದಿಂದ ಬಂಟ್ವಾಳ ಕಡೆಗೆ ನಿಧಾನವಾಗಿ ಹೋಗುತ್ತಿರುವ ಸಂದರ್ಭ ಅಬ್ದುಲ್ ರಜಾಕ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರ ದಂಪತಿ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment