ತೆಕ್ಕಾರು ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್. - Karavali Times ತೆಕ್ಕಾರು ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್. - Karavali Times

728x90

4 May 2025

ತೆಕ್ಕಾರು ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್.

ಮಂಗಳೂರು, ಮೇ 04, 2025 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಸಮೀಪದ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮುಸ್ಲಿಮರ ವಿರುದ್ದ ಅವಾಚ್ಯ ಶಬ್ದ ಬಳಸಿ ಪ್ರಚೋದನಕಾರಿ ಭಾಷಣ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. 

ಸ್ಥಳೀಯ ನಿವಾಸಿ ಇಬ್ರಾಹಿಂ ಎಸ್ ಬಿ ಎಂಬವರು ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ. ಪೂಂಜಾ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ತಮ್ಮ ಭಾಷಣದ ಮೂಲಕ ಕೋಮು ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದವರು ದೂರಿನಲ್ಲಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ತಮ್ಮ ನಾಲಗೆ ಹರಿಬಿಟ್ಟಿದ್ದು, ಪೂಂಜಾ ಅವರ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಭಾಷಣದ ವಿಷಯವು ಧಾರ್ಮಿಕ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವನ್ನು ಬಿತ್ತಬಹುದು ಮತ್ತು ಪ್ರದೇಶದಲ್ಲಿ ಕೋಮು ಸಾಮರಸ್ಯವನ್ನು ಕದಡಬಹುದು ಎಂದು ದೂರಿನಲ್ಲಿ ತಿಳಿಸಲಾಗಿರುವ ಹಿನ್ನಲೆಯಲ್ಲಿ ಬಿಎನ್‍ಎಸ್‍ಎಸ್ ಸೆಕ್ಷನ್ 196 ಮತ್ತು 352(2)ರಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

  • Blogger Comments
  • Facebook Comments

0 comments:

Post a Comment

Item Reviewed: ತೆಕ್ಕಾರು ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್. Rating: 5 Reviewed By: karavali Times
Scroll to Top