ಧರ್ಮಸ್ಥಳ, ಮೇ 05, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಮಹಿಳೆ ವ್ಯಾನಿಟಿ ಬ್ಯಾಗಿನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಮೇ 3 ರಂದು ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆ, ಗೋಮತಿ ನಗರ, ಸಾಯಿ ಹೃದಯ ಟೆಂಪಲ್, ಶ್ರೀನಗರ ಕಾಲೊನಿ ನಿವಾಸಿ ಜೆ ಲತಾ (47) ಅವರು ಮೇ 2 ರಂದು ಅಂದ್ರಪ್ರದೇಶದ ನೆಲ್ಲೂರುನಿಂದ ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳಕ್ಕೆ ತಲುಪಿದ್ದಾರೆ. ಬಳಿಕ ಅಲ್ಲಿಂದ ದೇವರ ದರ್ಶನಕ್ಕೆ ಹೋಗುವ ಮೊದಲು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೇಸ್ ಗಳನ್ನು ವ್ಯಾನಿಟಿ ಬ್ಯಾಗಿನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗಿನಲ್ಲಿಟ್ಟು ದೇವರ ದರ್ಶನ ಮುಗಿಸಿ ಹೊರಡುವ ಸಮಯ ಬ್ಯಾಗ್ ನೋಡಿದಾಗ ವ್ಯಾನಿಟಿ ಬ್ಯಾಗಿನ ಜಿಪ್ಪು ತೆರೆದಿದ್ದು, ಬ್ಯಾಗ್ ಪರಿಶೀಲಿಸಿದಾಗ ಒಳಗಡೆ ಪ್ಲಾಸ್ಟಿಕ್ ಬಾಕ್ಸಿನಲ್ಲಿಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 6.79 ಲಕ್ಷ ರೂಪಾಯಿ ಆಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment