ಬಂಟ್ವಾಳ, ಮೇ 04, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ ಕೋಮುದ್ವೇಷದ ಪ್ರಚೋದನಾತ್ಮಕ ವೀಡಿಯೋ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಎಂದು ಗುರುತಿಸಲಾಗಿದೆ. ಈತ ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಭಾನುವಾರ ಈತನ ವಿರುದ್ದ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment