ಕೊಳತ್ತಮಜಲು ರಹಿಮಾನ್ ಹತ್ಯಾ ಪ್ರಕರಣ : ಮೂವರು ಆರೋಪಿಗಳ ಬಂಧಿಸಿದ ಪೊಲೀಸ್ ತಂಡ - Karavali Times ಕೊಳತ್ತಮಜಲು ರಹಿಮಾನ್ ಹತ್ಯಾ ಪ್ರಕರಣ : ಮೂವರು ಆರೋಪಿಗಳ ಬಂಧಿಸಿದ ಪೊಲೀಸ್ ತಂಡ - Karavali Times

728x90

29 May 2025

ಕೊಳತ್ತಮಜಲು ರಹಿಮಾನ್ ಹತ್ಯಾ ಪ್ರಕರಣ : ಮೂವರು ಆರೋಪಿಗಳ ಬಂಧಿಸಿದ ಪೊಲೀಸ್ ತಂಡ

ಬಂಟ್ವಾಳ, ಮೇ 29, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ-ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಯಾನೆ ರಹೀಂ (34) ಅವರನ್ನು ಮಾರಕಾಯುಧಗಳನ್ನು ಕೊಲೆಗೈದ ಹಾಗೂ ಜೊತೆಗಿದ್ದ ಶಾಫಿ ಯಾನೆ ಖಲಂದರ್ ಶಾಫಿ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಗುರುವಾರ ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಗಳನ್ನು ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪ್ರøಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19) ಎಂದು ಗುರುತಿಸಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2025 ಕಲಂ 191[1], 191[2], 191[3], 118[1]. 118 [2], 109, 103 ಜೊತೆಗೆ 190 ಬಿ ಎನ್ ಎಸ್ 2023ರಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ 5 ತನಿಖಾ ತಂಡಗಳನ್ನು ರಚಿಸಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೊಳತ್ತಮಜಲು ರಹಿಮಾನ್ ಹತ್ಯಾ ಪ್ರಕರಣ : ಮೂವರು ಆರೋಪಿಗಳ ಬಂಧಿಸಿದ ಪೊಲೀಸ್ ತಂಡ Rating: 5 Reviewed By: karavali Times
Scroll to Top