ಬಂಟ್ವಾಳ, ಮೇ 30, 2025 (ಕರಾವಳಿ ಟೈಮ್ಸ್) : ಭಾರೀ ಮಳೆ ಪರಿಣಾಮ ಅಕ್ಕಿ ಲೋಡ್ ಹೊಂದಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲೇ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ಎಸ್ ವಿ ಎಸ್ ಕಾಲೇಜು ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಕಾರ್ಮಿಕನನ್ನು ಜಾರ್ಖಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಎನ್ನಲಾಗಿದ್ದು, ಆದರ್ಶ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.
ನಿರ್ಮಲಾ ಅನ್ಸ್ತಾ ಹಾಗೂ ಆದರ್ಶ ಅವರು ಲಾರಿಯ ಹಿಂಬದಿ ಅಕ್ಕಿ ಲೋಡ್ ಮೇಲೆ ಕುಳಿತುಕೊಂಡಿದ್ದರು, ಈ ಪೈಕಿ ನಿರ್ಮಲಾ ಅನ್ಸ್ತಾ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟರೆ ಆದರ್ಶ ಗಾಯಗೊಂಡಿದ್ದಾನೆ. ಈತನನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಸುಜಿತ್ ಹಾಗೂ ಕ್ಲೀನರ್ ಸಿ ಮೋಹನ್ ಮುರ್ಮ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆ ಮಾರ್ಗವಾಗಿ ಬಂಟ್ವಾಳಕ್ಕೆ ಬರುವ ವೇಳೆ ಬಂಟ್ವಾಳದ ಎಸ್ ವಿ ಎಸ್ ಕಾಲೇಜು ಬಳಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೆÇಲೀಸರು ಬೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment