ಪಡೀಲ್ : ಮೇ 16 ರಂದು (ನಾಳೆ) ನೂತನ ದ.ಕ. ಜಿಲ್ಲಾಡಳಿತ ಕೇಂದ್ರ “ಪ್ರಜಾ ಸೌಧ” ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ - Karavali Times ಪಡೀಲ್ : ಮೇ 16 ರಂದು (ನಾಳೆ) ನೂತನ ದ.ಕ. ಜಿಲ್ಲಾಡಳಿತ ಕೇಂದ್ರ “ಪ್ರಜಾ ಸೌಧ” ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ - Karavali Times

728x90

15 May 2025

ಪಡೀಲ್ : ಮೇ 16 ರಂದು (ನಾಳೆ) ನೂತನ ದ.ಕ. ಜಿಲ್ಲಾಡಳಿತ ಕೇಂದ್ರ “ಪ್ರಜಾ ಸೌಧ” ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಮಂಗಳೂರು, ಮೇ 15, 2025 (ಕರಾವಳಿ ಟೈಮ್ಸ್) : ಮಂಗಳೂರು ಸ್ಟೇಟ್ ಬ್ಯಾಂಕಿನಲ್ಲಿ ಕಾರ್ಯಾಚರಿಸುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ ಇದೀಗ ನೂತನ ಕಟ್ಟಡ ನಿರ್ಮಾಣದೊಂದಿಗೆ ಪಡೀಲ್ ಜಂಕ್ಷನ್ನಿಗೆ ಸ್ಥಳಾಂತರಗೊಳ್ಳುತ್ತಿದ್ದು, ನೂತನ ಕಟ್ಟಡ “ಪ್ರಜಾ ಸೌಧ”ವನ್ನು ಮೇ 16 ರಂದು ಶುಕ್ರವಾರ ಅಪರಾಹ್ನ 3.30ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ ಮಂಗಳೂರು ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ಹಮ್ಮಿಕೊಂಡಿರುವ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಕನ್ನಡ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ವಹಿಸಲಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಫರೀದ್, ದ ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವ ಬಿ ಝಡ್ ಝಮೀರ್ ಅಹ್ಮದ್ ಖಾನ್, ನಗರಾಭಿವೃದ್ದಿ ಸಚಿವ ಸುರೇಶ್ ಬಿ ಎಸ್, ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ ಎಂ ಶಿವಲಿಂಗೇ ಗೌಡ ಮೊದಲಾದವರು ಭಾಗವಹಿಸಲಿದ್ದಾರೆ. 

ಇದೇ ವೇಳೆ ಫಲಾನುಭವಿಗಳಿಗೆ ‘ನನ್ನ ಭೂಮಿ’ ಪಹಣಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಡೀಲ್ : ಮೇ 16 ರಂದು (ನಾಳೆ) ನೂತನ ದ.ಕ. ಜಿಲ್ಲಾಡಳಿತ ಕೇಂದ್ರ “ಪ್ರಜಾ ಸೌಧ” ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ Rating: 5 Reviewed By: karavali Times
Scroll to Top