ಮಂಗಳೂರು : ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ - Karavali Times ಮಂಗಳೂರು : ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ - Karavali Times

728x90

30 May 2025

ಮಂಗಳೂರು : ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು, ಮೇ 31, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ನೂತನ ಪೆÇಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಸಿ ಎಚ್, ಐ.ಪಿ.ಎಸ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. 

ನಿರ್ಗಮನ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಂದ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೆÇಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಗುರುವಾರ ವರ್ಗಾಯಿಸಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಉಪ ಪೆÇಲೀಸ್ ಮಹಾನಿರೀಕ್ಷಕರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿತ್ತು. ಅವರಿಂದ ತೆರವಾದ ಸ್ಥಾನಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆಂಧ್ರ ಮೂಲದವರಾದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಸರಕಾರ ನೇಮಕ ಮಾಡಿತ್ತು. ಶುಕ್ರವಾರವೇ ರೆಡ್ಡಿ ಅವರು ಮಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರೆಡ್ಡಿ ಅವರು ಈ ಹಿಂದೆ ಅಂದರೆ 2017-18ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿ ಇಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಗುರುವಾರವಷ್ಟೆ ನೇಮಕಗೊಂಡಿದ್ದ ಡಾ ಅರುಣ್ ಕೆ ಅವರು ಕೂಡಾ ಶುಕ್ರವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡಿದ್ದು, ಪ್ರಕ್ಷುಬ್ದ ಮಂಗಳೂರಿಗೆ ಇದೀಗ ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡಾ ಹೊದಬರಾಗಿ ನೇಮಕಗೊಂಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡುವ ಬಗ್ಗೆ ಸಾರ್ವಜನಿಕರು ಆಶಾಭಾವ ಹೊಂದಿದ್ದಾರೆ.  

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Rating: 5 Reviewed By: karavali Times
Scroll to Top