ಬಂಟ್ವಾಳ, ಮೇ 29, 2025 (ಕರಾವಳಿ ಟೈಮ್ಸ್) : ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದ ಅಜೇರುಮಜಲು ಎಂಬಲ್ಲಿ ಮೇ 27 ರಂದು ರಾತ್ರಿ ಸಂಭವಿಸಿದೆ.
ಇಲ್ಲಿನ ನಿವಾಸಿ ಗಣೇಶ (43) ಎಂಬವರೇ ಬಾವಿಗೆ ಹಾರಿ ಜೀವ ಕಳೆದುಕೊಂಡ ವ್ಯಕ್ತಿ. ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಇವರು ಇದೇ ಕಾರಣದಿಂದ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರ ಸಹೋದರ ರಾಮನಾಯ್ಕ ಎಂಬವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment