ಬೆಂಗಳೂರು, ಮೇ 08, 2025 (ಕರಾವಳಿ ಟೈಮ್ಸ್) : ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆಯು ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಬೆಂಬಲವಾಗಿ ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರ (ನಾಳೆ ಮೇ 9) ವಿಶೇಷ ಪ್ರಾರ್ಥನೆ ಸಲ್ಲಿಸಲು ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖಾ ಸಚಿವ ಬಿ ಝಡ್ ಝಮೀರ್ ಅಹ್ಮದ್ ಸೂಚಿಸಿದ್ದಾರೆ. ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಹಾಗೂ ಅವರಿಗೆ ನೈತಿಕ ಬಲ ತುಂಬುವ ನಿಟ್ಟಿನಲ್ಲಿ ಶುಕ್ರವಾರ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವರು ಮಸೀದಿಗಳಿಗೆ ಸುತ್ತೋಲೆ ರವಾನಿಸುವಂತೆ ರಾಜ್ಯ ವಕ್ಫ್ ಮಂಡಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದಾರೆ.
8 May 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment