ಬಂಟ್ವಾಳ, ಜೂನ್ 01, 2025 (ಕರಾವಳಿ ಟೈಮ್ಸ್) : ಬಂಟ್ಬಾಳ ತಾಲೂಕು ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆಯು ಪೆÇಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಭಾನುವಾರ ನಡೆಯಿತು.
ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ ಜೋಗೊಟ್ಟು ಸಭಾಧ್ಯಕ್ಷತೆ ವಹಿಸಿದ್ದರು. ಕಟ್ಟಡ ಸಮಿತಿ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸೇವಾ ದಳಪತಿ ಗಣೇಶ್ ಕುಲಾಲ್ ಬೆದ್ರಗುಡ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲ್ಯಾನ್ ಸಂಚಯಗಿರಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಸೋಮನಾಥ ಸಾಲ್ಯಾನ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷೆ ಜಲಜಾಕ್ಷಿ ಸ್ವಾಗತಿಸಿ, ಮೀನಾಕ್ಷಿ ಪದ್ಮನಾಭ ವಂದಿಸಿದರು. ಮಹಿಳಾ ಘಟಕದ ಸದಸ್ಯೆಯರಾದ ಯಶೋಧ, ನಳಿನಿ ರಮೇಶ್ ಕೈಕುಂಜೆ ಮತ್ತು ಯೋಗಿತಾ ಪ್ರಾರ್ಥನೆ ಮಾಡಿದರು.
0 comments:
Post a Comment