ಸುಳ್ಯ : ಸರಕಾರಿ ಬಸ್ಸುಗಳ ಮಧ್ಯೆ ಅಪಘಾತದಲ್ಲಿ ಓರ್ವ ಮಹಿಳೆ ಮೃತ್ಯು, 19 ಮಂದಿ ಪ್ರಯಾಣಿಕರಿಗೆ ಗಾಯ - Karavali Times ಸುಳ್ಯ : ಸರಕಾರಿ ಬಸ್ಸುಗಳ ಮಧ್ಯೆ ಅಪಘಾತದಲ್ಲಿ ಓರ್ವ ಮಹಿಳೆ ಮೃತ್ಯು, 19 ಮಂದಿ ಪ್ರಯಾಣಿಕರಿಗೆ ಗಾಯ - Karavali Times

728x90

25 June 2025

ಸುಳ್ಯ : ಸರಕಾರಿ ಬಸ್ಸುಗಳ ಮಧ್ಯೆ ಅಪಘಾತದಲ್ಲಿ ಓರ್ವ ಮಹಿಳೆ ಮೃತ್ಯು, 19 ಮಂದಿ ಪ್ರಯಾಣಿಕರಿಗೆ ಗಾಯ

 ಸುಳ್ಯ, ಜೂನ್ 25, 2025 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದು, ಸುಮಾರು 19 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. 

ಮೃತ ಮಹಿಳೆಯನ್ನು ಮಡಿಕೇರಿ-ಕುಶಾಲನಗರ ನಿವಾಸಿ ಭಾರತಿ (50) ಎಂದು ಹೆಸರಿಸಲಾಗಿದೆ. ಸುಳ್ಯದಿಂದ  ಮಡಿಕೇರಿ ಕಡೆಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಮಡಿಕೇರಿ ಕಡೆಯಿಂದ ಸುಳ್ಯ ಮಾರ್ಗವಾಗಿ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಸುಳ್ಯ ಮಾರ್ಗವಾಗಿ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. 

ಅಪಘಾತದಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, 17 ಮಂದಿಗೆ ಸಾಮಾನ್ಯ ಗಾಯಾಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪಿಎಸ್ಸೈ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿರುವ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಈ ಬಗ್ಗೆ ಸುಳ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಸರಕಾರಿ ಬಸ್ಸುಗಳ ಮಧ್ಯೆ ಅಪಘಾತದಲ್ಲಿ ಓರ್ವ ಮಹಿಳೆ ಮೃತ್ಯು, 19 ಮಂದಿ ಪ್ರಯಾಣಿಕರಿಗೆ ಗಾಯ Rating: 5 Reviewed By: karavali Times
Scroll to Top