ಬಂಟ್ವಾಳ, ಜೂನ್ 21, 2025 (ಕರಾವಳಿ ಟೈಮ್ಸ್) : ಭಾರತ ಕಮ್ಯೂನಿಸ್ಟ್ ಪಕ್ಷದ 25ನೇ ಬಂಟ್ವಾಳ ತಾಲೂಕು ಸಮ್ಮೇಳನ ಜೂನ್ 29ರಂದು ಭಾನುವಾರ ಬಂಟ್ವಾಳದ ಎ ಶಾಂತಾರಾಂ ಪೈ ಸ್ಮಾರಕ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣದೊಂದಿಗೆ ಸಮ್ಮೇಳನ ಆರಂಭಗೊಳ್ಳಲಿದ್ದು, ಬಳಿಕ ಸಮ್ಮೇಳನದ ಕಾರ್ಯಕಲಾಪಗಳು ನಡೆಯಲಿದೆ. ಬಂಟ್ವಾಳ ತಾಲೂಕಿನ ಪ್ರಸ್ತುತ ಸವiಸ್ಯೆಗಳ ಕುರಿತಾಗಿ ಸಮ್ಮೇಳನದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಸಮಸ್ಯೆಗಳ ಪರಿಹಾರ ಕುರಿತಂತೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಕೈಗೊಳ್ಳಲಾಗುವುದು.
ಈಗಾಗಲೇ ಬಂಟ್ವಾಳ ತಾಲೂಕಿನ ವಿವಧ ಗ್ರಾಮ ಶಾಖೆಯ ಪಕ್ಷದ ಸಮ್ಮೇಳನಗಳು ಯಶಸ್ವಿಯಾಗಿ ನಡೆದಿದ್ದು ವಿವಿಧ ಶಾಖೆಗಳಿಂದ ಸುಮಾರು 100 ಜನ ಪ್ರತಿನಿಧಿಗಳು ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರುಗಳು ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಪಕ್ಷದ ವಿವಿಧ ಶಾಖೆಗಳಿಂದ ಆಯ್ಕೆಗೊಂಡ ಪ್ರತಿನಿಧಿ ಸಂಗಾತಿಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು, ಸಮ್ಮೇಳನದ ಯಶಸ್ಸಿಗೆ ಸಹಕರಿಸುವಂತೆ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ತಿಳಿಸಿದ್ದಾರೆ.
ಪಕ್ಷದ ಶತಮಾನೋತ್ಸವ ಸಂಭ್ರಮಾಚರಣೆಯ ಸಂಧರ್ಭದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಪಕ್ಷದ ಸಮ್ಮೇಳನಗಳು ಆರಂಭಗೊಂಡಿದ್ದು, ಪಕ್ಷದ ಸಂವಿಂಧಾನದಂತೆ ಗ್ರಾಮ ಶಾಖೆಯಿಂದ ಆರಂಭಗೊಳ್ಳುವ ಸಮ್ಮೇಳನಗಳು ರಾಷ್ಟ್ರೀಯ ಅಧಿವೇಶನದ ಮೂಲಕ ಸಮಾಪನಗೊಳ್ಳಲಿದೆ.
0 comments:
Post a Comment