ಚಂದಳಿಕೆ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ - Karavali Times ಚಂದಳಿಕೆ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ - Karavali Times

728x90

20 June 2025

ಚಂದಳಿಕೆ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ

ಬಂಟ್ವಾಳ, ಜೂನ್ 20, 2025 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ಸಂಭವಿಸಿದೆ. 

ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ನಾಗೇಶ (38) ಎಂದು ಹೆಸರಿಸಲಾಗಿದೆ. ಇವರು ಬುಧವಾರ ರಾತ್ರಿ 8 ಗಂಟೆಗೆ ಮನೆಯಿಂದ ಚಂದಳಿಕೆ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದಾಗ ಚಂದಳಿಕೆ ಎಂಬಲ್ಲಿ ಪುತ್ತೂರು ಕಡೆಯಿಂದ ಹರ್ಷವರ್ಧನ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ನಾಗೇಶ ಅವರ ತಲೆಗೆ, ಎಡಕೈಗೆ ಹಾಗೂ ಕಾಲಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯೇನಪೋಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಚಂದಳಿಕೆ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ Rating: 5 Reviewed By: karavali Times
Scroll to Top