ಬಂಟ್ವಾಳ, ಜೂನ್ 20, 2025 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ಸಂಭವಿಸಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ನಾಗೇಶ (38) ಎಂದು ಹೆಸರಿಸಲಾಗಿದೆ. ಇವರು ಬುಧವಾರ ರಾತ್ರಿ 8 ಗಂಟೆಗೆ ಮನೆಯಿಂದ ಚಂದಳಿಕೆ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದಾಗ ಚಂದಳಿಕೆ ಎಂಬಲ್ಲಿ ಪುತ್ತೂರು ಕಡೆಯಿಂದ ಹರ್ಷವರ್ಧನ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ನಾಗೇಶ ಅವರ ತಲೆಗೆ, ಎಡಕೈಗೆ ಹಾಗೂ ಕಾಲಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯೇನಪೋಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment