ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನ ಕಾಸರಗೋಡು ಎಸ್ಪಿ ಜೊತೆ ಮಂಗಳೂರು ಕಮಿಷನರ್ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ : ಹಲವು ವಿಚಾರಗಳ ಬಗ್ಗೆ ಚರ್ಚೆ - Karavali Times ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನ ಕಾಸರಗೋಡು ಎಸ್ಪಿ ಜೊತೆ ಮಂಗಳೂರು ಕಮಿಷನರ್ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ : ಹಲವು ವಿಚಾರಗಳ ಬಗ್ಗೆ ಚರ್ಚೆ - Karavali Times

728x90

2 June 2025

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನ ಕಾಸರಗೋಡು ಎಸ್ಪಿ ಜೊತೆ ಮಂಗಳೂರು ಕಮಿಷನರ್ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ : ಹಲವು ವಿಚಾರಗಳ ಬಗ್ಗೆ ಚರ್ಚೆ

ಮಂಗಳೂರು, ಜೂನ್ 02, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ಕಾಸರಗೋಡು ಜಿಲ್ಲಾ ಎಸ್ಪಿ ಅವರೊಂದಿಗೆ ಸಭೆ ನಡೆಸಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. 

ಕೋಮು ಪ್ರಕರಣಗಳಲ್ಲಿ ಬೇಕಾಗಿರುವ ಶಂಕಿತರು ಮತ್ತು ಪರಾರಿಯಾಗಿರುವ ಆರೋಪಿಗಳ ಪತ್ತೆ ಬಗ್ಗೆ, ಕೋಮು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಅಂತರರಾಜ್ಯ ಅಪರಾಧಗಳ ನಿಯಂತ್ರಣ, ಅಕ್ರಮ ದನಗಳ ಹಾಗೂ ಅಕ್ರಮ ಮರಳು ಸಾಗಣೆಯ ವಿರುದ್ದ ಜಂಟಿ ಮೇಲ್ವಿಚಾರಣೆ ಮತ್ತು ದಾಳಿ, ಗಡಿಯ ಎರಡೂ ಬದಿಗಳಲ್ಲಿ ಕೋಮು ಗಲಭೆಕೋರರ ಬಗ್ಗೆ ಮಾಹಿತಿ ಹಂಚಿಕೆ ಹಾಗೂ ಮಂಗಳೂರು ನಗರದಲ್ಲಿ ಓದುತ್ತಿರುವ ಕೇರಳ ವಿದ್ಯಾರ್ಥಿಗಳ ಸಮಸ್ಯೆಗಳು ಇವೇ ಮೊದಲಾದ ವಿಷಯಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನ ಕಾಸರಗೋಡು ಎಸ್ಪಿ ಜೊತೆ ಮಂಗಳೂರು ಕಮಿಷನರ್ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ : ಹಲವು ವಿಚಾರಗಳ ಬಗ್ಗೆ ಚರ್ಚೆ Rating: 5 Reviewed By: karavali Times
Scroll to Top