ಮಂಗಳೂರು, ಜೂನ್ 11, 2025 (ಕರಾವಳಿ ಟೈಮ್ಸ್) : ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದಿನ್ ಬಾವಾ ಹಾಗೂ ಅವರ ಇಬ್ಬರು ಸಹಚರರ ವಿರುದ್ದ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 9 ರಂದು ರಾತ್ರಿ ಸುಮಾರು 8 ಗಂಟೆಗೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೆಯರ್ ಪರ್ಸನ್ ಅವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿರುತ್ತಾರೆ ಎಂದು ಆರೋಪಿಸಲಾಗಿದೆ. ಬಳಿಕ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿ ಕಿರಿಚುತ್ತಾ ಬಂದಿದ್ದು, ಕಾರಿನಲ್ಲಿ ಬೇರೆ ಕರ್ತವ್ಯಕ್ಕೆ ಹೋಗುತ್ತಿರುವಾಗ ಕಾರನ್ನು ಸಹ ತಡೆದು ನಿಲ್ಲಿಸಿ, ವಾದ-ವಿವಾದ ಮಾಡಿರುವ ಬಗ್ಗೆ ಎನ್ ಎಂ ಪಿ ಎ ಪಣಂಬೂರು ಸೆಕ್ರೆಟರಿ ಅವರು ಜೂನ್ 10 ರಂದು ಸಂಜೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸ್ ತನಿಖೆ ಮುಂದುವರೆದಿದೆ.
0 comments:
Post a Comment