ಬಸ್ಸಿಗೆ ಕೈ ತೋರಿಸಿ ಗಾಜಿಗೆ ಕಲ್ಲೆಸೆದು ಪರಾರಿಯಾದ ವ್ಯಕ್ತಿ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಬಸ್ಸಿಗೆ ಕೈ ತೋರಿಸಿ ಗಾಜಿಗೆ ಕಲ್ಲೆಸೆದು ಪರಾರಿಯಾದ ವ್ಯಕ್ತಿ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

1 June 2025

ಬಸ್ಸಿಗೆ ಕೈ ತೋರಿಸಿ ಗಾಜಿಗೆ ಕಲ್ಲೆಸೆದು ಪರಾರಿಯಾದ ವ್ಯಕ್ತಿ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಜೂನ್ 01, 2025 (ಕರಾವಳಿ ಟೈಮ್ಸ್) : ಬಸ್ಸಿಗೆ ಕೈ ಸನ್ನೆ ಮಾಡಿದ ವ್ಯಕ್ತಿಯೋರ್ವ ಬಸ್ಸು ನಿಲ್ಲಿಸಿ ಗಾಜಿಗೆ ಕಲ್ಲೆಸೆದು ಪರಾರಿಯಾದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ರಾತ್ರಿ ಸಂಭವಿಸಿದೆ. 

ಈ ಬಗ್ಗೆ ಬಸ್ಸು ಚಾಲಕ ಬಂದಾರು ಗ್ರಾಮದ ಮೈರೋಳ್ತಡ್ಕ-ಕೋಡಿ ನೆಕ್ಕಿಲು ನಿವಾಸಿ ಸತೀಶ್ (40) ಅವರು ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿದ್ದು, ಇವರು ಚೇತನ್ ಬಂದಾರು ಎಂಬವರ ಮಾಲಕತ್ವದ ಕೆಎ19 ಎಡಿ9221 ನೋಂದಣಿ ಸಂಖ್ಯೆಯ ಶಿವ ಕೃಪಾ ಬಸ್ಸಿನಲ್ಲಿ ಚಾಲಕನಾಗಿ ಹಾಗೂ ಚೇತನ್ ಎಂಬವರು ನಿರ್ವಾಹಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ 30 ರಂದು ಸಂಜೆ ಉಪ್ಪಿನಂಗಡಿಯಿಂದ ಪ್ರಯಾಣಿಕರನ್ನು ಬಸ್ಸಿನಲ್ಲಿ ಕುಳ್ಳಿರಿಸಿಕೊಂಡು ಮಡಂತ್ಯಾರು ಕಡೆಗೆ ಹೊರಟು ಬರುತ್ತಾ ಸಂಜೆ 7:10 ರ ವೇಳೆಗೆ ಬೆಳ್ತಂಗಡಿ ತಾಲೂಕು, ಮಚ್ಚಿನ ಗ್ರಾಮದ, ಬಂಗೇರಕಟ್ಟೆ ಕಲ್ಲಗುಡ್ಡೆ ಎಂಬಲ್ಲಿಗೆ ತಲುಪಿದಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿಯು ರಸ್ತೆಯ ಬಲ ಬದಿಯಲ್ಲಿ ರೈನ್ ಕೋಟ್ ಧರಿಸಿಕೊಂಡು ನಿಂತಿದ್ದವನು ಬಸ್ಸು ನಿಲ್ಲಿಸುವಂತೆ ಕೈ ಸನ್ನೆ ಮಾಡಿದಾಗ ಸತೀಶ್ ಅವರು ಬಸ್ಸು ನಿಲ್ಲಿಸಲು ಬ್ರೇಕ್ ಹಾಕಿದ್ದಾರೆ. ಸದ್ರಿ ಅಪರಿಚಿತ ವ್ಯಕ್ತಿ ಬಸ್ಸಿನ ಮುಂಭಾಗಕ್ಕೆ ಬಂದು ಆತನ ಕೈಯಲ್ಲಿದ್ದ ಮುಷ್ಠಿ ಗಾತ್ರದ ಕಲ್ಲನ್ನು ಬಸ್ಸಿನ ಮುಂಭಾಗದ ಗಾಜಿಗೆ ಬಿಸಾಡಿ ಕಲ್ಲಗುಡ್ಡೆ ಕಡೆಗೆ ಓಡಿ ಹೋಗಿರುತ್ತಾನೆ. ಆತನ ಕೃತ್ಯದಿಂದ ಬಸ್ಸಿನ ಗಾಜು ಒಡೆದಿರುವುದರಿಂದ ಸುಮಾರು 40 ಸಾವಿರ ರೂಪಾಯಿ ನಷ್ಟ ಉಂಟಾಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಸ್ಸಿಗೆ ಕೈ ತೋರಿಸಿ ಗಾಜಿಗೆ ಕಲ್ಲೆಸೆದು ಪರಾರಿಯಾದ ವ್ಯಕ್ತಿ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top