ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಮುಂದುವರಿದ ಪೊಲೀಸ್ ಬೇಟೆ : ಇನ್ಸ್ಟಾಗ್ರಾಂ ಖಾತೆ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಮುಂದುವರಿದ ಪೊಲೀಸ್ ಬೇಟೆ : ಇನ್ಸ್ಟಾಗ್ರಾಂ ಖಾತೆ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

1 June 2025

ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಮುಂದುವರಿದ ಪೊಲೀಸ್ ಬೇಟೆ : ಇನ್ಸ್ಟಾಗ್ರಾಂ ಖಾತೆ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ಜೂನ್ 01, 2025 (ಕರಾವಳಿ ಟೈಮ್ಸ್) : ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ತೀವ್ರ ಕ್ರಮ ಮುಂದುವರಿಸಿದ್ದಾರೆ. 

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಖಾತೆಯ “mangalore_ beary_warrior_03” ಎಂಬ ಪೇಜಿನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೊಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಭಾನುವಾರ ರಂದು ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ  41/2025 ಕಲಂ 55, 103, 353(2) ಬಿ ಎನ್ ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಮುಂದುವರಿದ ಪೊಲೀಸ್ ಬೇಟೆ : ಇನ್ಸ್ಟಾಗ್ರಾಂ ಖಾತೆ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top