ಪುತ್ತೂರು, ಜೂನ್ 30, 2025 (ಕರಾವಳಿ ಟೈಮ್ಸ್) : ವೈಯುಕ್ತಿಕ ವಿಚಾರದಲ್ಲಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣವಾದ ಎಕ್ಸ್ (ಟ್ವಟರ್) ಖಾತೆಯಲ್ಲಿ, ಪಕ್ಷ, ಧರ್ಮಗಳ ನಡುವೆ ಹಾಗೂ ಸಂಘಟನೆಗಳ ನಡುವೆ ವೈಮನಸ್ಸು ಉಂಟಾಗಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಂಭವ ಇರುವಂತಹ ಅಶ್ಲೀಲ ಹಾಗೂ ಅಸಂಬಧ್ಧ ಬರಹಗಳುಳ್ಳ ಪೋಸ್ಟ್ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಪೋಸ್ಟನ್ನು ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ದ ಭಾನುವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 51/2025 ಕಲಂ 296, 196(1)(ಎ), 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
30 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment