ಮಂಗಳೂರು, ಜೂನ್ 19, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ 2016ರ ಕರ್ನಾಟಕ ಬ್ಯಾಚ್ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರು ದರ್ಶನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ರಾಜ್ಯದ 16 ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿತ್ತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2013 ರ ಕರ್ನಾಟಕ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಎಂ ಪಿ ಅವರನ್ನು ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಶನ್ ಆಂಡ್ ಕಮಿಷನರ್ ಆಫ್ ಸ್ಟಾಂಪ್ಸ್, ಬೆಂಗಳೂರು ಈ ಹುದ್ದೆಗೆ ವರ್ಗಾವಣೆಗೊಳಿಸಲಾಗಿದ್ದು, ಬೆಂಗಳೂರು ಕಮರ್ಷಿಯಲ್ ಟ್ಯಾಕ್ಸ್ ಅಡಿಶನಲ್ ಕಮಿಷನರ್ ಆಗಿದ್ದ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರಕಾರ ಆದೇಶಿಸಿತ್ತು. ಮುಲ್ಲೈ ಮಹಿಲನ್ ಅವರು 2023ರ ಜೂನ್ 17 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ 2 ವರ್ಷ ಪೂರೈಸಿದ್ದು, ಇದೀಗ ವರ್ಗಾವಣೆಗೊಂಡಿದ್ದಾರೆ.
0 comments:
Post a Comment