ಮಂಗಳೂರು, ಜೂನ್ 19, 2025 (ಕರಾವಳಿ ಟೈಮ್ಸ್) : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಪಾರಂಪರಿಕ ಕೈ ಮಗ್ಗದ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಜೂನ್ 21 ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸೌಧದಲ್ಲಿ ನಡೆಯಲಿದೆ.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಎ ಬಿ ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಯ ಅಸೋಸಿಯೇಟ್ ಡೀನ್ ಡಾ ಅಮರಶ್ರೀ ಅಮರನಾಥ ಶೆಟ್ಟಿ ಅವರು ಚಾವಡಿ ತಮ್ಮನ ನಡೆಸಿಕೊಡುವರು. ಕಿನ್ನಿಗೋಳಿಯ ಅನಂತ ಪ್ರಕಾಶ ಸಂಪಾದಕ ಕೊಡೆತ್ತೂರು ಸಚ್ಚಿದಾನಂದ ಉಡುಪ, ಹಿರಿಯ ಸಾಹಿತಿ ಡಾ ಪ್ರಭಾಕರ ನೀರುಮಾರ್ಗ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಹಾಗೂ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಂಘದ ಅಧ್ಯಕ್ಷೆ ರುಕ್ಮಿಣಿ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕದಿಕೆ ಟ್ರಸ್ಟ್ ಅಧ್ಯಕ್ಷ ಮಮತಾ ರೈ ಅಭಿನಂದನಾ ಭಾಷಣ ಮಾಡುವರು ಎಂದು ತುಳು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.
0 comments:
Post a Comment