ಬಂಟ್ವಾಳ, ಜೂನ್ 24, 2025 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ವಿವಿಧ ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಕಳೆದ ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲೆ ಡಾ ಎನ್ ಎಸ್ ಜೈರಾಭಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ್, ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ನಿಕಟಪೂರ್ವ ಪ್ರಾಂಶುಪಾಲ ಸುರೇಶ್ ಬಿ ಐತಾಳ್ ಶುಭ ಹಾರೈಸಿದರು.
ಕಾಲೇಜು ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ್ ಕೆ ಬೆಳ್ಳಾರೆ, ಶೋಭಾ, ಸಿಂಧೂಜ, ವೇದಾವತಿ, ಕಚೇರಿ ಸಿಬ್ಬಂದಿಗಳಾದ ಲತಾ, ಸಂಜೀವಣ್ಣ, ಪೆÇೀಷಕರಾದ ಅಬ್ದುಲ್ ಬಶೀರ್, ಸಾರಮ್ಮ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಳೆದ ಬಾರಿ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಕಾಲೇಜಿನ ವಿದ್ಯಾರ್ಥಿನಿಯರಾದ ಅಸ್ಪಿಯಾ ಮತ್ತು ಆಯಿಷತ್ ಮುಬೀನ ಬಾನು ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿ ಸ್ಫೂರ್ತಿ ಸ್ವಾಗತಿಸಿ, ಬಾಲಕೃಷ್ಣ ಎನ್ ವಿ ವಂದಿಸಿದರು. ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment