ಸುಬ್ರಹ್ಮಣ್ಯ, ಜೂನ್ 10, 2025 (ಕರಾವಳಿ ಟೈಮ್ಸ್) : ಸುಬ್ರಹ್ಮಣ್ಯ ಪೆÇಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಗ್ರಾಮದ ಕಾಶಿಕಟ್ಟೆ ಮಾರ್ಗವಾಗಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಲಾಡ್ಜ್ ವೊಂದರ ಮುಂಭಾಗ ಯುವಕನೊಬ್ಬನು, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಮತ್ತೊಬ್ಬ ಯುವಕನನ್ನು ತಡೆದು ನಿಲ್ಲಿಸಿ, ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಕೈಯಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವಾಟ್ಸಾಪ್ ಮೂಲಕ ವೈರಲ್ ಆಗಿರುತ್ತದೆ. ಯುವಕನಿಗೆ ಹಲ್ಲೆ ಮಾಡಿದ ಆರೋಪಿ ಶಂಕರ್ ಎಂಬಾತನ ವಿರುದ್ದ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
10 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment