ಕಡಬ, ಜೂನ್ 05, 2025 (ಕರಾವಳಿ ಟೈಮ್ಸ್) : ಪೊಲೀಸರ ವಿರುದ್ದ ದ್ವೇಷ ಭಾಷಣದ ಮಾಡಿದ ಆರೋಪಿ ನವೀನ್ ನೆರಿಯ ಎಂಬಾತನ ವಿರುದ್ದ ಕಡಬ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬುಧವಾರ ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು, ಕಡಬ ಪೊಲೀಸ್ ಠಾಣೆಯ ಬಳಿ ಕಡಬ-ಸುಬ್ರಹ್ಮಣ್ಯ ರಸ್ತೆಯಿಂದ ಕಡಬ ಪೊಲೀಸ್ ಠಾಣೆಗೆ ಬರುವ ರಸ್ತೆಯಲ್ಲಿ ನಿಂತು, ನವೀನ್ ನೆರಿಯ ಎಂಬಾತನು ಪೊಲೀಸರನ್ನುದ್ದೇಶಿಸಿ ದ್ವೇಷ ಭಾಷಣ ಮಾಡಿರುತ್ತಾನೆ ಹಾಗೂ ತನ್ನ ಭಾಷಣದ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರನ್ನುದ್ದೇಶಿಸಿ ಪ್ರಚೋದನಕಾರಿ ಮಾತನಾಡಿರುತ್ತಾನೆ. ಇದರಿಂದ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆತನ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 42/2025 ಕಲಂ 353(2) ಬಿ ಎನ್ ಎಸ್-2023 ರಂತೆ ಬುಧವಾರವೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
0 comments:
Post a Comment