ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು : ಮುಂದಿನ ಕೆಲ ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು : ಮುಂದಿನ ಕೆಲ ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times

728x90

11 June 2025

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು : ಮುಂದಿನ ಕೆಲ ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಜೂನ್ 11, 2025 (ಕರಾವಳಿ ಟೈಮ್ಸ್) : ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 17ರವರೆಗೂ ಭಾರೀ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಈ ಪೈಕಿ 9 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಅಂತೆಯೇ ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾಪೆರ್Çರೇಷನ್, ವಿಧಾನಸೌಧ, ಎಸ್.ಆರ್ ನಗರ, ಮಲ್ಲೇಶ್ವರಂ, ಶೇಶಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಹಲವು ರಸ್ತೆಗಳು ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡಿದ್ದಾರೆ.

ಕರ್ನಾಟಕ್ಕೆ ಈ ಬಾರಿ ಮುಂಗಾರು ಮಳೆ ಮೇ 24 ರಂದೇ ಅಪ್ಪಳಿಸಿತ್ತು. ಈ ಮೂಲಕ ಹಲವು ವರ್ಷಗಳ ದಾಖಲೆಯನ್ನೇ ಮುರಿದಿತ್ತು. ಮೇ ತಿಂಗಳಲ್ಲಿ ಗರಿಷ್ಠ ಮಳೆಯಾಗುವ ಮೂಲಕ ಕರ್ನಾಟಕದ ಬಹುತೇಕ ಜಲಾಶಗಳು ತುಂಬಿತ್ತು. ಇದೀಗ ಜೂನ್ 12 ರಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು : ಮುಂದಿನ ಕೆಲ ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Rating: 5 Reviewed By: karavali Times
Scroll to Top