ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಪಿಡಿಒ ಗೋಕುಲದಾಸ ಭಕ್ತ ಅಮಾನತು - Karavali Times ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಪಿಡಿಒ ಗೋಕುಲದಾಸ ಭಕ್ತ ಅಮಾನತು - Karavali Times

728x90

25 June 2025

ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಪಿಡಿಒ ಗೋಕುಲದಾಸ ಭಕ್ತ ಅಮಾನತು

 ಬಂಟ್ವಾಳ, ಜೂನ್ 25, 2025 (ಕರಾವಳಿ ಟೈಮ್ಸ್) : ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಇಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೂನ್ 23 ರಂದು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಪಕ್ಷವೊಂದರ ಸಭೆ ನಡೆಸಲು ಪಂಚಾಯತ್ ಪಿಡಿಒ ಗೋಕುಲ್ ದಾಸ್ ಭಕ್ತ ಅವರು ಅವಕಾಶ ಕಲ್ಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆಯನ್ನು ತೋರಿರುವ ಹಿನ್ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್‍ದಾಸ್ ಭಕ್ತ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅವರು ಪಿಡಿಒ ಭಕ್ತ ಅವರಿಗೆ ಶೋಕಾಸ್ ನೋಟಿಸು ಜಾರಿಮಾಡಿದ್ದರು. ಸದ್ರಿ ನೋಟೀಸಿಗೆ ಪಿಡಿಒ ಅವರು ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ತನ್ನ ಗಮನಕ್ಕೆ ಬಂದಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದರು ಎನ್ನಲಾಗಿದೆ. ಪಿಡಿಒ ನೀಡಿರುವ ಸಮಜಾಯಿಷಿಕೆ ಒಪ್ಪತಕ್ಕದ್ದಲ್ಲ. ಸರಕಾರಿ ಕಛೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ಅವಕಾಶ ನೀಡುವುದು ಸಮಂಜಸವಲ್ಲ. ಇದಕ್ಕೆ ಅವಕಾಶ ನೀಡಿದ ಪಂಚಾಯತ್ ಪಿಡಿಒ ಅವರು ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಉಲ್ಲೇಖಿಸಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ಮೇಲಧಿಕಾರಿಗೆ ವರದಿ ಸಲ್ಲಿಸಿದ್ದರು.

ಇಒ ಅವರ ವರದಿಯ ಆಧಾರದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಪಿಡಿಒ ಗೋಕುಲ್‍ದಾಸ್ ಭಕ್ತ ಅವರನ್ನು ಕರ್ನಾಟಕ ಸರಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957ರ 10ನೇ ನಿಯಮದ (1)(ಡಿ) ಉಪನಿಯಮದಂತೆ ಸೇವೆಯಿಂದ ಅಮಾನತುಗೊಳಿಸುವುದು ಸೂಕ್ತವೆಂದು ಶಿಸ್ತು ಪ್ರಾಧಿಕಾರವು ತೀರ್ಮಾನಿಸಿ ಈ ಆದೇಶ ಹೊರಡಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಪಿಡಿಒ ಗೋಕುಲದಾಸ ಭಕ್ತ ಅಮಾನತು Rating: 5 Reviewed By: karavali Times
Scroll to Top