ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸ್ಥಳೀಯರ ಕೈಗೆ ಸಿಕ್ಕಿದ ಆರೋಪಿ - Karavali Times ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸ್ಥಳೀಯರ ಕೈಗೆ ಸಿಕ್ಕಿದ ಆರೋಪಿ - Karavali Times

728x90

12 June 2025

ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸ್ಥಳೀಯರ ಕೈಗೆ ಸಿಕ್ಕಿದ ಆರೋಪಿ

 ಕಡಬ, ಜೂನ್ 12, 2025 (ಕರಾವಳಿ ಟೈಮ್ಸ್) : ಕಳ್ಳತನಕ್ಕಾಗಿ ದೈವಸ್ಥಾನದ ಬಾಗಿಲು ಒಡೆಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಡಬ ತಾಲೂಕಿನ ಅಲಂಕಾರು ಗ್ರಾಮದಲ್ಲಿ ಜೂನ್ 10 ರಂದು ರಾತ್ರಿ ನಡೆದಿದೆ.

ಕಳವುಗೈಯಲು ದೈವಸ್ಥಾನದ ಬಾಗಿಲು ಒಡೆಯಲು ಯತ್ನಿಸಿದ ಆರೋಪಿಯನ್ನು ಹನುಮಂತರಾಯ ಯಾನೆ ಗೌಡನಗೌಡ ಎಂದು ಹೆಸರಿಸಲಾಗಿದೆ. ಈ ಬಗ್ಗೆ ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸ್ಥಳೀಯ ನಿವಾಸಿ ಎಸ್ ಡಿ ಕೀರ್ತಿ (72) ಎಂಬವರು ಕಡಬ ಪೊಲೀಸರಿಗೆ ದೂರು ನೀಡಿದ್ದು, ಇವರು ಜೂನ್ 10 ರಂದು ರಾತ್ರಿ ದೈವಸ್ಥಾನದ ಬಳಿ ಹೋದಾಗ ಅಲ್ಲಿ ಓರ್ವ ವ್ಯಕ್ತಿ ದೈವಸ್ಥಾನದ ಬಾಗಿಲ ಬೀಗವನ್ನು ಒಡೆಯುವರೇ ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ. ತಕ್ಷಣ ಅವರು ಪರಿಚಿತರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿ ಬಳಿಕ ಅವರು ಬಾಗಿಲು ಒಡೆಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ವಿಚಾರಿಸಿದಾಗ ಆತ ತನ್ನ ಹೆಸರು ಹನುಮಂತರಾಯ ಯಾನೆ ಗೌಡನಗೌಡ ಎಂದು ಹೇಳಿದ್ದು, ಆತನು ದೈವಸ್ಥಾನದಲ್ಲಿ ಬೆಲೆಬಾಳುವ ವಸ್ತುಗಳಿರಬಹುದು ಎಂದು ಬಾಗಿಲನ್ನು ಒಡೆಯಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಆರೋಪಿಯನ್ನು ಠಾಣೆಗೆ ಕರೆತಂದು ದೂರು ನೀಡಲಾಗಿದೆ. ಈ ಬಗ್ಗೆ ಕಡಬ ಪೆÇಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸ್ಥಳೀಯರ ಕೈಗೆ ಸಿಕ್ಕಿದ ಆರೋಪಿ Rating: 5 Reviewed By: karavali Times
Scroll to Top