ಬಂಟ್ವಾಳ, ಜೂನ್ 08, 2025 (ಕರಾವಳಿ ಟೈಮ್ಸ್) : ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ಕೆದಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ಮೇ 6 ರಂದು ರಾತ್ರಿ ವೇಳೆ ನಡೆದಿದೆ.
ಹಲ್ಲೆಯಿಂದ ನೋವಿಗೊಳಗಾದ ವ್ಯಕ್ತಿಯನ್ನು ಕೆದಿಲ ನಿವಾಸಿ ಅಬೂಬಕ್ಕರ್ ರಾಶಿಕ್ (28) ಎಂದು ಹೆಸರಿಸಲಾಗಿದೆ. ಇವರು ಮೇ 6 ರಂದು ತನ್ನ ಕಾರಿನಲ್ಲಿ ಮಾರಿಪಳ್ಳಕ್ಕೆ ಹೋಗಿ ವಾಪಾಸು ಬರುತ್ತಿದ್ದ ವೇಳೆ ರಾತ್ರಿ 10 ಗಂಟೆ ವೇಳೆ ಕೆದಿಲ ಗ್ರಾಮದ ಗಾಂಧಿನಗರ ಎಂಬಲ್ಲಿಗೆ ತಲುಪಿದಾಗ ಆರೋಪಿಗಳಾದ ಶಾಫಿ ಗಡಿಯಾರ ಹಾಗೂ ಜೆಸಿಬಿ ಸಿದ್ದೀಕ್ ಎಂಬವರು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ರಾಶಿಕ್ ಕಾರನ್ನು ರಸ್ತೆ ಬದಿ ನಿಲ್ಲಿಸಿ ಕಾರಿನಿಂದ ಇಳಿದು ವಿಚಾರಿಸಿದಾಗ ಆರೋಪಿಗಳು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿ ಹೋಗಿದ್ದಾರೆ. ಬಳಿಕ ರಾಶಿಕ್ ಹಲ್ಲೆಯಿಂದ ಆಗಿರುವ ನೋವಿಗೆ ಚಿಕಿತ್ಸೆ ಪಡೆಯಲು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment